ತಿರುಪತಿಯಿಂದ 15 ಕಿ.ಮೀ ದೂರದಲ್ಲಿರುವ ತಿರುಪತಿ ವಿಮಾನನಿಲ್ದಾಣಕ್ಕೆ ಬಂದಿಳಿದ ಮುಖರ್ಜಿ, ವೆಂಕಟೇಶ್ವರ ದೇವಾಲಯಕ್ಕೆ ತೆರಳುವ ಮುನ್ನ ಮೊದಲಿಗೆ ತಿರುಚೂನರ್ನಲ್ಲಿರುವ ಶ್ರೀ ಪದ್ಮಾವತಿ ದೇವಾಲಯಕ್ಕೆ ಭೇಟಿ ನೀಡಿದರು ನಂತರ ಕಪಿಲೇಶ್ವರ್ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ.
ರಾಷ್ಟ್ರಪತಿಯವರ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ರಾಜ್ಯಪಾಲ ಇಎಸ್ಎಲ್, ನರಸಿಂಹನ್ ಕೂಡಾ ಉಪಸ್ಥಿತರಿದ್ದರು. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖರ್ಜಿ ಎರಡನೇ ಬಾರಿಗೆ ತಿರುಪತಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ.