ಈ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಭಾರಿಯಾಗಿದ್ದೇನೆ ಎಂದ ಪ್ರಧಾನಿ ಮೋದಿ

ಸೋಮವಾರ, 8 ಫೆಬ್ರವರಿ 2021 (12:11 IST)
ನವದೆಹಲಿ : ಮಾಜಿ ಪ್ರಧಾನಿ ದೇವೇಗೌಡರಿಗೆ ನಾನು ಅಭಾರಿಯಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಅವರ ಜೀವನ ರೈತರಿಗೆ ಅರ್ಪಿತವಾಗಿದೆ. ದೇವೇಗೌಡರು ಉತ್ತಮ ಸಲಹೆಗಳನ್ನು ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ತಿಳಿಸಿದ್ದಾರೆ.

ಹಾಗೇ ಕೃಷಿ ಕಾಯ್ದೆ ವಿಚಾರ ಮಾತನಾಡಿದ ಅವರು, ರೈತರ ವಿಚಾರದಲ್ಲಿ ದೇಶದಲ್ಲಿ ರಾಜಕೀಯ ನಡೆಯುತ್ತಿದೆ. ಕೆಲವು ಪಕ್ಷಗಳು ಕಾಯ್ದೆ ವಿಚಾರದಲ್ಲಿ ಯುಟರ್ನ್ ಹೊಡೆದಿದೆ. ಕೃಷಿ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರಾಜಕೀಯ ಮಾಡ್ತಿದ್ದಾರೆ. ಕಾಯ್ದೆ ಬಗ್ಗೆ ಆರೋಗ್ಯಕರ ಚರ್ಚೆ ಮಾಡೋದಿಲ್ಲ. ರಾಜಕೀಯ ಮಾಡಲೆಂದೆ ಕಾಯ್ದೆ ಬಗ್ಗೆ ಟೀಕೆ ಮಾಡ್ತಾರೆ. ಬದಲಾವಣೆ ಅಗತ್ಯ ಅದನ್ನು ಎಲ್ಲರೂ ಸ್ವೀಕರಿಸಲೇಬೇಕು ಎಂದು ಹೇಳಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ