ಪ್ರಧಾನಿ ನರೇಂದ್ರ ಮೋದಿ ಕೇವಲ ಸುಳ್ಳು ಅಶ್ವಾಸನೆಗಳ ಸರದಾರ

ಗುರುವಾರ, 2 ನವೆಂಬರ್ 2023 (14:07 IST)
ಬಿಜೆಪಿ ಪಕ್ಷದ ಪ್ರಧಾನಿ ನರೇಂದ್ರ ಮೋದಿ ಕೇವಲ ಸುಳ್ಳು ಅಶ್ವಾಸನೆಗಳ ಸರದಾರರಾಗಿದ್ದಾರೆ. ಕೇವಲ ಪೊಳ್ಳು ಭರವಸೆಗಳನ್ನು ನೀಡುವ ಮೂಲಕ ಬಿಜೆಪಿ ಬಡವರ ಶೋಷಿತರ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಕಿಡಿಕಾರಿದರು.
 
 
ಬಿಜೆಪಿ ಸರಕಾರದ ದುರಾಡಳಿತದಿಂದ  ಬಡತನ ಮಿತಿಮೀರಿದೆ. ಬಿಜೆಪಿ ಪಕ್ಷ ಕೇವಲ ಭರವಸೆಗಳನ್ನು ನೀಡುತ್ತದೆ. ಆದರೆ, ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂದು ಚುನಾವಣೆ ಪ್ರಚಾರದಲ್ಲಿ ತಿರುಗೇಟು ನೀಡಿದ್ದಾರೆ.
 
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಲ್ಲಿ ಜನತೆಗೆ ಉತ್ತಮ ಅಡಳಿತ ನೀಡಲಾಗುವುದು. ಬಡವರ, ಶೋಷಿತರ ಪರ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ