ರೈತರೊಂದಿಗೆ ಸಂವಾದ ನಡೆಸಲಿದ್ದಾರಂತೆ ಪ್ರಧಾನಿ ನರೇಂದ್ರ ಮೋದಿ

ಶುಕ್ರವಾರ, 15 ಜೂನ್ 2018 (14:29 IST)
ನವದೆಹಲಿ : ದೇಶಾದ್ಯಂತ ರೈತರು ಕಿಸಾನ್ ಅವಕಾಶ ಹೆಸರಿನಲ್ಲಿ ನಡೆಸಿದ ೧೦ ದಿನಗಳ ಮುಷ್ಕರದ ಹಿನ್ನೆಲೆಯಲ್ಲಿ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಜೂನ್ ೨೦ರಂದು ಬೆಳಿಗ್ಗೆ 9.30 ರಿಂದ ಈ  ಸಂವಾದ ಕಾರ್ಯಕ್ರಮ ಆರಂಭವಾಗಲಿದ್ದು, ಭಾರತದಾದ್ಯಂತ ಎಲ್ಲಾ ರೈತರೊಂದಿಗೆ ತಾನು ನಮೋ ಆ್ಯಪ್ ಮೂಲಕ ಸಂವಾದ ನಡೆಸಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹಾಗೇ ಕೃಷಿ ಕ್ಷೇತ್ರಕ್ಕೆ ಸಂಬಂಧ ಪಟ್ಟ ಎಲ್ಲಾ ರೀತಿಯ ವಿಷಗಳ ಬಗ್ಗೆ ಚರ್ಚೆ ನಡೆಸಲಿರುವುದಾಗಿ ಹಾಗೂ ಚರ್ಚೆ ನಡೆಸುವ ಸಲುವಾಗಿ ಎಲ್ಲಾ ಸಾಮಾನ್ಯ ಸೇವಾ ಕೇಂದ್ರಗಳಿಗೆ 50 ರಿಂದ 100 ರೈತರನ್ನು ಕರೆತರುವಂತೆ ಮೊದಿ ಅವರು ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ