ಅದಕ್ಷ ಸಚಿವರಿಗೆ ಗೇಟ್‌ಪಾಸ್: ಹೊಸಬರಿಗೆ ಮಣೆ ಹಾಕಲಿರುವ ಪ್ರಧಾನಿ ಮೋದಿ?

ಸೋಮವಾರ, 19 ಜೂನ್ 2017 (15:26 IST)
ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದು, ಹೊಸಬರಿಗೆ ಆದ್ಯತೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಚಿವರು ತಮ್ಮ ತಮ್ಮ ಇಲಾಖೆಯಲ್ಲಿ ರೂಪಿಸಿದ ಅಭಿವೃದ್ಧಿ ಕಾರ್ಯಗಳು, ಅದರಿಂದ ಎಷ್ಟು ಜನರಿಗೆ ಲಾಭವಾಗಿದೆ ಎನ್ನುವುದರ ಬಗ್ಗೆ ಸಂಪೂರ್ಣವಾದ ವಿವಾರಗಳನ್ನು ಸಲ್ಲಿಸುವಂತೆ ಪ್ರಧಾನಿ ಕಚೇರಿ ಮೂಲಕ ಸಚಿವರಿಗೆ ಪತ್ರ ರವಾನಿಸಲಾಗಿದೆ.
 
ಪ್ರಧಾನಿ ಮೋದಿ ಅಮೆರಿಕ ಪ್ರವಾಸದಿಂದ ದೇಶಕ್ಕೆ ವಾಪಸಾದ ನಂತರ ಸಚಿವ ಸಂಪುಟ ಪುನರ್‌ರಚನೆಯಾಗಲಿದೆ. ಅದಕ್ಷ ಮಂತ್ರಿಗಳನ್ನು ಸಚಿವ ಸ್ಥಾನದಿಂದ ಕೈ ಬಿಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಪ್ರಧಾನಿ ಕಚೇರಿಯ ಪತ್ರದಿಂದ ಕಂಗಾಲಾಗಿರುವ ಸಚಿವರು ತಮ್ಮ ಇಲಾಖೆ ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಪಟ್ಟಿ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ