ಸಚಿವೆ ಸ್ಮೃತಿ ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ ಸೋನಿಯಾ ಪುತ್ರಿ ಪ್ರಿಯಾಂಕಾ

ಬುಧವಾರ, 27 ಮೇ 2015 (17:45 IST)
ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಯಾಕೆ ಐಐಟಿಯನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ ಎನ್ನುವ ಬಗ್ಗೆ ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಬಹಿರಂಗವಾಗಿ ಹೇಳಿಕೆ ನೀಡಬೇಕು ಎಂದು ಸೋನಿಯಾ ಪುತ್ರಿ ಪ್ರಿಯಾಂಕಾ ವಾದ್ರಾ ಒತ್ತಾಯಿಸಿದ್ದಾರೆ.
 
ರಾಯಬರೇಲಿಯ ಸ್ರೆನಿ ಗ್ರಾಮದ ಗ್ರಾಮಸ್ಥರನ್ನು ಭೇಟಿಯಾಗಲು ಬಂದಿದ್ದ ಪ್ರಿಯಾಂಕಾ, ಕೇಂದ್ರದಲ್ಲಿ ಸರಕಾರ ಬಂದು ಒಂದು ವರ್ಷವಾದರೂ ಯಾಕೆ ಐಐಟಿ ಸ್ಥಾಪಿಸಲು ಸಾಧ್ಯವಾಗಿಲ್ಲ ಎನ್ನುವುದನ್ನು ಕೇಂದ್ರ ಸಚಿವೆ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.
 
ಪ್ರಿಯಾಂಕಾ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವೆ ಸ್ಮೃತಿ ಇರಾನಿ, ನಾನು ಅಮೇಥಿಗೆ ಭೇಟಿ ನೀಡಿದ ಮಾರನೇ ದಿನ ನನ್ನ ವಿರುದ್ಧ ಆರೋಪಗಳನ್ನು ಮಾಡುವುದು ಕಾಂಗ್ರೆಸ್ ಪಕ್ಷದ ಹಳೆ ಮಾದರಿಯ ರಾಜಕಾರಣ ಎಂದು ತಿರುಗೇಟು ನೀಡಿದ್ದಾರೆ.  
 
ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ವರ್ಷಾಚಾರಣೆ ಹಿನ್ನೆಲೆಯಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿಯವರ ಲೋಕಸಭೆ ಕ್ಷೇತ್ರವಾದ ಅಮೇಥಿಗೆ ಭೇಟಿ ನೀಡಿದ್ದರು. 
 

ವೆಬ್ದುನಿಯಾವನ್ನು ಓದಿ