ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿ ಅವರಿಗೆ ಶಿಮ್ಲಾದ ಹೊರವಲಯದ ಛರಾಬಡಾದಲ್ಲಿ ಮನೆ ಕಟ್ಟಿಸಲು ನೀಡಿರುವ ಪರವಾನಿಗೆಯನ್ನು ರದ್ದು ಪಡಿಸಬೇಕೆಂದು ಬಿಜೆಪಿ ಶಾಸಕ ಸುರೇಶ್ ಭಾರದ್ವಾಜ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದು ಹೆಚ್ಚಿನ ಭದ್ರತೆಯ ವಲಯವಾಗಿರುವುದರಿಂದ ಅವರು ಈ ಕೋರಿಕೆಯನ್ನು ಮುಂದಿಟ್ಟಿದ್ದಾರೆ.