ಪಂಜಾಬ್, ದೆಹಲಿ ಎನ್‌ಸಿಆರ್‌ನಲ್ಲಿ ಉಗ್ರರ ದಾಳಿ ಸಾಧ್ಯತೆ: ಗುಪ್ತಚರ ದಳ

ಬುಧವಾರ, 23 ಮಾರ್ಚ್ 2016 (19:11 IST)
ಪಂಜಾಬ್, ದೆಹಲಿ ಎನ್‌ಸಿಆರ್‌‌ನಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ದಳದ ಅಧಿಕಾರಿಗಳು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ಇಂಡಿಗೋ ಫ್ಲೈಟ್‌‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇಂಡಿಗೋ ಸಂಸ್ಥೆಯ ಮುಖ್ಯ ಕಚೇರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ತಪಾಸಣೆ ಕಾರ್ಯ ಕೈಗೊಂಡಿದ್ದು, ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ದೇಶದಲ್ಲಿ ಒಟ್ಟು 10 ವಿಮಾನಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲ ಅಪರಿಚಿತ ವ್ಯಕ್ತಿಗಳು ಬೆದರಿಕೆ ಕರೆ ಮಾಡಿದ್ದಾರೆ ಎಂದು ಇಂಡಿಗೋ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
 
ಹೋಳಿ ಆಚರಣೆ ವೇಳೆ ಉಗ್ರರ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ದಳದ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದೆ. ಎಲ್ಲಾ ರಾಜ್ಯಗಳು ಕಟ್ಟು ನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಗೃಹ ಸಚಿವಾಲಯ ರಾಜ್ಯ ಸರಕಾರಗಳಿಗೆ ಆದೇಶ ನೀಡಿದೆ. 
 

ವೆಬ್ದುನಿಯಾವನ್ನು ಓದಿ