ಬಿಜೆಪಿ-ಆರ್ ಎಸ್ಎಸ್ ದೇಶ ಇಬ್ಭಾಗ ಮಾಡಿದೆ: ರಾಹುಲ್ ಗಾಂಧಿ ಆರೋಪ

ಮಂಗಳವಾರ, 12 ಜೂನ್ 2018 (09:10 IST)
ನವದೆಹಲಿ: ಬಿಜೆಪಿ ಮತ್ತು ಅದರ ಸಹ ಸಂಘಟನೆ ಆರ್ ಎಸ್ಎಸ್ ದೇಶವನ್ನು ಇಬ್ಭಾಗ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ನಡೆದ ಒಬಿಸಿ ಸಮ್ಮೇಳನದಲ್ಲಿ ಮಾತನಾಡಿದ ಅವರು ಮತ್ತೊಮ್ಮೆ ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆರ್ ಎಸ್ಎಸ್ ಗೆ ವಿಭಜನೆ ಮಾಡುವುದೇ ಕೆಲಸ. ಒಬಿಸಿ ಸಮುದಾಯದಲ್ಲಿ ಬಿರುಕು ಮೂಡಿಸಲು ಅದು ಯತ್ನಿಸುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಅಷ್ಟೇ ಏಕೆ ಬಿಜೆಪಿ ಸಂಸದರು, ಶಾಸಕರಿಗೇ ಪ್ರಧಾನಿ ಮೋದಿ ಮತ್ತು ಆರ್ ಎಸ್ಎಸ್ ವಿರುದ್ಧವಾಗಿ ಮಾತನಾಡದಂತೆ ದಿಗ್ಬಂಧನ ವಿಧಿಸಲಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ