ನೇತಾಜಿ ಅಪ್ರತಿಮ ಧೈರ್ಯಶಾಲಿ ನಾಯಕ ಎಂದು ವರ್ಣಿಸಿದ ರಾಹುಲ್ ಗಾಂಧಿ

ಶನಿವಾರ, 23 ಜನವರಿ 2016 (18:47 IST)
ನೇತಾಜಿ ಸುಭಾಷ್ ಚಂದ್ರ ಬೋಸ್‌ರ 119ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭೋಸ್ ಅಪ್ರತಿಮ ಧೈರ್ಯಶಾಲಿ, ದೇಶಭಕ್ತ ಮತ್ತು ಜನಾನುರಾಗಿ ನಾಯಕರಾಗಿದ್ದರು ಎಂದು ಬಣ್ಣಿಸಿದ್ದಾರೆ.
 
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೋರಾಟ ಸದಾ ನಮಗೆ ಸ್ಪೂರ್ತಿ ನೀಡುತ್ತದೆ ಎಂದರು.
 
ಭಾರತ ದೇಶವನ್ನು ಸ್ವತಂತ್ರ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟ, ತ್ಯಾಗ, ಬಲಿದಾನಗಳನ್ನು ಕಾಂಗ್ರೆಸ್ ಪಕ್ಷ ಮತ್ತು ಭಾರತ ದೇಶ ಶಾಶ್ವತವಾಗಿ ಸ್ಮರಿಸುತ್ತದೆ. ಅವರ ದೇಶಭಕ್ತಿ ಪ್ರತಿಯೊಬ್ಬ ಭಾರತೀಯನಿಗೆ ಸ್ಪೂರ್ತಿಯ ಸೆಲೆಯಾಗಿದೆ ಎಂದರು. 
 
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆ ಅಂಗವಾಗಿ ದೇಶದ ಹಲವು ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ಸೇವೆಯನ್ನು ಸ್ಮರಿಸಲಾಯಿತು. ನೇತಾಜಿಯವರ ಜನ್ಮಸ್ಥಳದಲ್ಲಿ ಅಜಾದ್ ಹಿಂದ್ ಫೌಜ್‌ ಅಥವಾ ಇಂಡಿಯನ್ ನ್ಯಾಷನಲ್ ಆರ್ಮಿಯ ಅಪರೂಪದ ಛಾಯಾ ಚಿತ್ರಗಳನ್ನು ಪ್ರದರ್ಶಿಸಲಾಯಿತು.
 

ವೆಬ್ದುನಿಯಾವನ್ನು ಓದಿ