ನೇತಾಜಿ ಸುಭಾಷ್ ಚಂದ್ರ ಬೋಸ್ರ 119ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭೋಸ್ ಅಪ್ರತಿಮ ಧೈರ್ಯಶಾಲಿ, ದೇಶಭಕ್ತ ಮತ್ತು ಜನಾನುರಾಗಿ ನಾಯಕರಾಗಿದ್ದರು ಎಂದು ಬಣ್ಣಿಸಿದ್ದಾರೆ.
ಭಾರತ ದೇಶವನ್ನು ಸ್ವತಂತ್ರ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟ, ತ್ಯಾಗ, ಬಲಿದಾನಗಳನ್ನು ಕಾಂಗ್ರೆಸ್ ಪಕ್ಷ ಮತ್ತು ಭಾರತ ದೇಶ ಶಾಶ್ವತವಾಗಿ ಸ್ಮರಿಸುತ್ತದೆ. ಅವರ ದೇಶಭಕ್ತಿ ಪ್ರತಿಯೊಬ್ಬ ಭಾರತೀಯನಿಗೆ ಸ್ಪೂರ್ತಿಯ ಸೆಲೆಯಾಗಿದೆ ಎಂದರು.