ಜಮೈತ್ ಉಲೇಮಾ-ಎ-ಹಿಂದ್ ಮುಖ್ಯಸ್ಥ ಮೌಲಾನಾ ಅಸಾದ್ ಮದನಿ ಆಯೋಜಿಸಿದ ಇದ್ ಮಿಲಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಬಿಜೆಪಿ-ಪಿಡಿಪಿ ಮೈತ್ರಿಕೂಟ ಎಡವಿರುವುದೇ ಇಂದಿನ ಉದ್ರಿಕ್ತ ಸ್ಥಿತಿಗೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈದ್-ಮಿಲಾದ್ ಕಾರ್ಯಕ್ರಮದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್, ಸೀತಾರಾಮ್ ಯೆಚೂರಿ, ಸಿಪಿಐ(ಎಂ) ಮುಖಂಡ ಮೊಹಮ್ಮದ್ ಸಲೀಮ್, ಗುಲಾಮ್ ನಬಿ ಆಜಾದ್, ಸಲ್ಮಾನ್ ಖುರ್ಷಿದ್ ಮತ್ತು ಶ್ರೀ ಪ್ರಕಾಶ್ ಜೈಸ್ವಾಲ್ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.