ಆದಾಗ್ಯೂ, ಮತ್ತೊಬ್ಬ ಕಾಂಗ್ರೆಸ್ ನಾಯಕ, ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವುದು "ಯೋಜಿತ ನಾಟಕ" ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಇದಕ್ಕೆ ಜವಾಬ್ದಾರರು ಎಂದು ವ್ಯಾಖ್ಯಾನಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಎರಡು ಬಣಗಳಾಗಿ ಒಡೆದಿದೆ. ಮುಲಾಯಂ ಸಹೋದರ ಶಿವಪಾಲ್ ಸಿಂಗ್ ಅವರದು ಒಂದು ಬಣವಾದರೆ, ಪುತ್ರ ಅಖಿಲೇಶ್ ಯಾದವ್ ಅವರದು ಇನ್ನೊಂದು ಬಣ. ಪಕ್ಷದಲ್ಲಿ ಎದ್ದಿರುವ ಗೊಂದಲವನ್ನು ಸರಿ ಪಡಿಸಲು ಶತಾಯಗತಾಯ ಯತ್ನಿಸುತ್ತಿರುವ ಮುಲಾಯಂ ಸಿಂಗ್ ಯಾದವ್ ತಮ್ಮ ತಮ್ಮ ಶಿವಪಾಲ್ ಸಿಂಗ್ ಮತ್ತು ಮಿತ್ರ ಅಮರ್ ಸಿಂಗ್ ಪರ ನಿಂತಿದ್ದಾರೆ.