ಪ್ರದಾನಮಂತ್ರಿ ನರೇಂದ್ರ ಮೋದಿ ಬಿಹಾರ್ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿರುವುದನ್ನು ಲೇವಡಿ ಮಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮತಗಳನ್ನು ಪಡೆಯಲು ಇಂತಹ ಭರವಸೆಗಳನ್ನು ನೀಡುವುದು ಅವರ ಹವ್ಯಾಸವಾಗಿದೆ. ಇದು ಕೂಡಾ ಒನ್ ರ್ಯಾಂಕ್ ಒನ್ ಪೆನ್ಶನ್ನಂತೆ ನೆನೆಗುದಿಗೆ ಮಾತ್ರ ಬೀಳದಿರಲಿ ಎಂದು ವ್ಯಂಗ್ಯವಾಡಿದ್ದಾರೆ.
ಬಿಹಾರ್ನಲ್ಲಿ ಪ್ಯಾಕೇಜ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಂಬರುವ 2017ರಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿಯೂ ಮೋದಿಯವರು ವಿಶೇಷ ಪ್ಯಾಕೇಜ್ ಘೋಷಿಸಿದಲ್ಲಿ ಆಶ್ಚರ್ಯವಾಗುವುದಿಲ್ಲ ಎಂದರು.