ಇವರೇ ನಿಜವಾದ ದೇಶಭಕ್ತರೆಂದ ರಾಹುಲ್ ಗಾಂಧಿ

ಶನಿವಾರ, 11 ಏಪ್ರಿಲ್ 2020 (09:51 IST)

ನವದೆಹಲಿ : ಕೊರೊನಾ ಭೀತಿ ನಡುವೆಯೂ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶಕ್ಕಾಗಿ, ಜನರಿಗಾಗಿ ಕೆಲಸ ಮಾಡುತ್ತಿರುವವರು ನಿಜವಾದ ದೇಶಭಕ್ತರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

 

ದೇಶ ಸಂಕಷ್ಟದಲ್ಲಿರುವಾಗ ನಿಸ್ವಾರ್ಥದಿಂದ ದುಡಿಯುವುದೇ ನಿಜವಾದ ದೇಶಭಕ್ತಿ. ಈ ಕಷ್ಟಕರ ಸಮಯದಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು . ಇವರು ಮುಖ್ಯವಾಹಿನಿಯಿಂದ ದೂರವುಳಿದು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೊಗಳಿದ್ದಾರೆ.

 

ದೇಶವಾಸಿಗಳಾಗಿ ನಾವು ಅವರಿಗೆ ಅಭಾರಿಯಾಗಿದ್ದೇವೆ. ಈ ಕೊರೊನಾ ವೈರಸ್ ಬಿಕ್ಕಟ್ಟಿಗೆ ಮುಕ್ತಿ ಸಿಕ್ಕ ಬಳಿಕ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ಅಪೂರ್ವ ಕೊಡುಗೆಯನ್ನು ಗುರುತಿಸಿ, ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ