ಅವಕಾಶವಾದಿ ನಿತೀಶ್ ಕುಮಾರ್ ನಮ್ಮನ್ನು ವಂಚಿಸಿದ್ರು: ರಾಹುಲ್ ಗಾಂಧಿ ವಾಗ್ದಾಳಿ

ಗುರುವಾರ, 27 ಜುಲೈ 2017 (18:07 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಾಮೈತ್ರಿಕೂಟ ತೊರೆದು ಎನ್‌ಡಿಎ ತೆಕ್ಕೆಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ಬಿಹಾರ್ ಸಿಎಂ ನಿತೀಶ್ ಕುಮಾರ್ ಅವಕಾಶವಾದಿ ರಾಜಕಾರಣ ಮಾಡುವ ಮೂಲಕ ನಮ್ಮ ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಳೆದ ನಾಲ್ಕು ತಿಂಗಳ ಹಿಂದೆಯೇ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದತ್ತ ಒಲವು ತೋರುತ್ತಿದ್ದಾರೆ ಎನ್ನುವುದು ನನಗೆ ತಿಳಿದಿತ್ತು. ಆದರೆ, ಅಕಸ್ಮಿಕವಾಗಿ ಎನ್‌ಡಿಎ ಸೇರುತ್ತಾರೆ ಎನ್ನುವ ಕಲ್ಪನೆಯಿರಲಿಲ್ಲ ಎಂದರು.
 
ಬಿಹಾರ್ ರಾಜ್ಯದ ಜನತೆ ಮಹಾಮೈತ್ರಿಕೂಟಕ್ಕೆ ಮತ ಹಾಕಿ ಅಧಿಕಾರ ನೀಡಿದ್ದಾರೆ. ಆದರೆ, ನಿತೀಶ್ ಸ್ವಾರ್ಥಕ್ಕಾಗಿ ರಾಜಕಾರಣ ಬಳಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ