ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್ ಗಾಂಧಿ

ಶನಿವಾರ, 25 ಆಗಸ್ಟ್ 2018 (16:21 IST)
ಮುಂಬರುವ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಸಂದರ್ಭದಲ್ಲಿ ಈ ಹಿಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿಮರ್ಶಗೆ ಇಳಿದಿದ್ದಾರೆ. ಪಕ್ಷದ ಸೋಲಿಗೆ ಕಾರಣ ಏನು ಎಂಬುದನ್ನು ತಡವಾಗಿ ಬಹಿರಂಗಪಡಿಸಿದ್ದಾರೆ.

ಕಳೆದ ಲೋಕಸಭೆಯ ಫಲಿತಾಂಶ ನಮ್ಮ ಕಣ್ಣ ಮುಂದಿದೆ. ಅದರಿಂದ ಪಾಠ ಕಲಿತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್ ನ ಅಂತರಾಷ್ಟ್ರೀಯ ವ್ಯೂಹಾತ್ಮಕ ಕೇಂದ್ರದಲ್ಲಿನ ಭಾಷಣ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಒಂದಷ್ಟು ಉದ್ಧಟತನ ಇತ್ತು. ಪಕ್ಷದ ಕೆಲವು ನಾಯಕರ ಉದ್ಧತನವೇ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದಿದ್ದಾರೆ. ಇದೇ ವೇಳೆ ಮುಂಬರುವ ಚುನಾವಣೆಗೆ ಪಕ್ಷ ಸಿದ್ಧಗೊಂಡಿದೆ. ಹಿಂದಿನ ಸೋಲಿನ ಕಹಿಯನ್ನು ಮರೆತು, ಗೆಲುವು ಸಾಧಿಸಲಾಗುತ್ತದೆ ಎಂದರು.

ಏತನ್ಮಧ್ಯೆ ಎಂದಿನಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಆರೋಪಗಳನ್ನು ಮಾಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ