ಕೋರ್ಟ್ ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ಮಂಗಳವಾರ, 12 ಜೂನ್ 2018 (10:52 IST)
ನವದೆಹಲಿ: ಆರ್ ಎಸ್ಎಸ್ ಹೊರಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ.

ಆದರೆ ರಾಹುಲ್ ಬದಲಿಗೆ ಅವರ ಪರ ವಕೀಲರು ಕೋರ್ಟ್ ಗೆ ಹಾಜರಾಗಲಿದ್ದಾರೆ. 2014 ರಲ್ಲಿ ರ್ಯಾಲಿಯೊಂದರಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಕೊಂದಿದ್ದು ಆರ್ ಎಸ್ಎಸ್ ಎಂದು ಹೇಳಿಕೆ ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಸಂಘಟನೆ ರಾಹುಲ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಸಂಬಂಧ ಕಳೆದ ತಿಂಗಳು ವಿಚಾರಣೆ ನಡೆಸಿದ ನ್ಯಾಯಾಲಯ ಜೂನ್ 12 ರೊಳಗಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಆದೇಶ ನೀಡಿತ್ತು. ಅದರಂತೆ ಇಂದು ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ