ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು

ಭಾನುವಾರ, 22 ಜುಲೈ 2018 (12:14 IST)
ನವದೆಹಲಿ: ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಮೇಲೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ದೆಹಲಿಯಲ್ಲಿ ನಡೆಯುತ್ತಿದೆ.

ಇತ್ತೀಚೆಗಷ್ಟೇ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

2019 ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವುದರ ಬಗ್ಗೆ ಈ ಸಭೆಯಲ್ಲಿ ಮುಖ್ಯವಾಗಿ ಚರ್ಚೆಯಾಗಲಿದೆ. ಕೆಲವೊಂದು ಮೂಲಗಳ ಪ್ರಕಾರ ಸಿದ್ದರಾಮಯ್ಯರನ್ನು ಮಂಡ್ಯ ಅಥವಾ ಮೈಸೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿ, ರಾಷ್ಟ್ರ ರಾಜಕಾರಣಕ್ಕೆ ಕಳುಹಿಸುವ ಉದ್ದೇಶವೂ ಇದೆ ಎನ್ನಲಾಗಿದೆ. ಅಂತೂ ಮುಂಬರುವ ಲೋಕಸಭೆ ದೃಷ್ಟಿಯಿಂದ ಕಾಂಗ್ರೆಸ್ ಗೆ ಈ ಸಭೆ ಮುಖ್ಯವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ