ರಾಜಸ್ಥಾನದ ಬರ್ಮೆರ್ ಜಿಲ್ಲೆಯ ಬೇಟೂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಕೈಲಾಶ್, ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ದೇಶದ್ರೋಹಿಗಳನ್ನು ಬೆಂಬಲಿಸಿರುವ ರಾಹುಲ್ ಗಾಂಧಿ ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ರಾಜಸ್ಥಾನದಲ್ಲಿ ರೈತ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಕಾಂಗ್ರೆಸ್ನಿಂದ ರಾಜಕುಮಾರ ಎಂದು ಕರೆಸಿಕೊಳ್ಳುವ ರಾಹುಲ್ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗುವ , ಅಫ್ಜಲ್ ಗುರುವನ್ನು ಹುತಾತ್ಮ ಎಂದು ಕರೆಯುವವರ ಪರವಾಗಿ ನಿಲ್ಲುತ್ತಾರೆ. ಅವರಿಗೆ ಭಾರತದಲ್ಲಿರುವ ಹಕ್ಕಿಲ್ಲ ಎಂದು ಚೌಧರಿ ಗುಡುಗಿದ್ದಾರೆ.
ತಮ್ಮ ಈ ದೃಷ್ಟಿಕೋನವನ್ನು ಸಮರ್ಥಿಸಿಕೊಂಡ ಅವರು, ರಾಹುಲ್ ಗಾಂಧಿಯಾಗಲಿ, ಅಥವಾ ಬೇರೆ ಯಾರೇ ಆಗಿರಲಿ, ಭಾರತದ ವಿರುದ್ಧ ಮಾತನಾಡಿದರೆ ಅವರನ್ನು ಗುಂಡಿಟ್ಟು ಕೊಲ್ಲಬೇಕು ಅಥವಾ ನೇಣು ಹಾಕಬೇಕು ಎಂದು ಹೇಳಿದ್ದಾರೆ.