ಪಂಜಾಬ್ ಪ್ರದೇಶ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ರಾಹುಲ್ ಈ ಮೊದಲು ಹೇಳಿದ್ದರು. ಆದರೆ ಎರಡನೆಯ ಬಾರಿಗೆ ಪಂಜಾಬ್ಗೆ ಭೇಟಿ ನೀಡಿದಾಗ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಸಂಪೂರ್ಣವಾಗಿ ಮೌನ ತಾಳಿದ್ದಾರೆ. ಇತರ ಪಕ್ಷಗಳನ್ನು ಬಿಡಿ, ಸ್ವತಃ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರೇ ಅವರ ಯು-ಟರ್ನ್ ವರ್ತನೆಯಿಂದ ಆಶ್ಚರ್ಯ ಚಕಿತರಾಗಿದ್ದಾರೆ ಎಂದಿದ್ದಾರೆ ಶರ್ಮಾ.