ಸದಾ ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೊಂದು ಹೇಳಿಕೆಯನ್ನು ನೀಡಿ ರಾಜಕೀಯ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿದ್ದಾರೆ. ನೆರೆಯ ನೇಪಾಳ ಮತ್ತು ಉತ್ತರ ಭಾರತದಲ್ಲಾದ ಭೀಕರ ಭೂಕಂಪಕ್ಕೆ ರಾಹುಲ್ ಗಾಂಧಿ ದನದ ಮಾಂಸ ತಿನ್ನುವುದೇ ಕಾರಣ ಎಂಬ ಅಸಂಬದ್ಧ ಹೇಳಿಕೆಯನ್ನವರು ನೀಡಿದ್ದಾರೆ.