ಕಾವೇರಿ ನದಿ ನೀರು ಹಂಚಿಕೆ; ಸುಪ್ರೀಂ ತೀರ್ಪಿನ ಬಗ್ಗೆ ರಜನಿಕಾಂತ್ ಅಸಮಾಧಾನ

ಶನಿವಾರ, 17 ಫೆಬ್ರವರಿ 2018 (07:07 IST)
ಚೆನ್ನೈ : ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವು ಶುಕ್ರವಾರ ಪ್ರಕಟಿಸಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಅವರು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ನಟ ರಜನಿಕಾಂತ್ ಅವರು’ ಸುಪ್ರೀಂ ಕೋರ್ಟ್ ತ್ರಿಸದಸ್ಯ ನೀಡಿರುವ ತೀರ್ಪಿನಿಂದ ತಮಿಳುನಾಡು ರೈತರಿಗೆ ಅನ್ಯಾಯವಾಗಿದೆ. ರೈತರಿಗೆ ಮಾರಕವಾಗಿರುವ ತೀರ್ಪು ಪುನರ್ ಪರಿಶೀಲನೆಗೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ