ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ರಾಜೀನಾಮೆ ಪಡೆಯಲು ಒತ್ತಾಯ

ಸೋಮವಾರ, 5 ಫೆಬ್ರವರಿ 2018 (21:54 IST)

ರಾಜಸ್ಥಾನದಲ್ಲಿ ಈಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ್ದರಿಂದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರಿಂದ ರಾಜೀನಾಮೆ ಪಡೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಎರಡು ಲೋಕಸಭೆ ಸ್ಥಾನ ಹಾಗೂ ಒಂದು ವಿಧಾನಸಭೆ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿತ್ತು. ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

ಕೋಟಾ ಜಿಲ್ಲೆಯ ಒಬಿಸಿ ಘಟಕ ಅಧ್ಯಕ್ಷ ಅಶೋಕ್ ಚೌಧರಿ ಅವರು ಅಮಿತ್ ಶಾ ಅವರಿಗೆ ಪತ್ರ ಬರೆದು, ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಕಾರ್ಯವೈಖರಿ ರಾಜ್ಯದ ಜನತೆಗೆ ತೃಪ್ತಿ ತಂದಿಲ್ಲ. ಪಕ್ಷದ ಕಾರ್ಯಕರ್ತರ ನೈತಿಕತೆ ಕುಗ್ಗುತ್ತಿದೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ