ಬಿಜೆಪಿ ಹೈಕಮಾಂಡ್‌‍ಗೆ ತಾಕತ್ತಿದ್ರೆ ನನ್ನನ್ನು ಪಕ್ಷದಿಂದ ಹೊರಹಾಕಲಿ : ಬಿಜೆಪಿ ಶಾಸಕ

ಭಾನುವಾರ, 7 ಜನವರಿ 2018 (18:36 IST)
ಒಂದು ವೇಳೆ, ಬಿಜೆಪಿಗೆ ತಾಕತ್ತಿದ್ದಲ್ಲಿ ಪಕ್ಷದಿಂದ ಹೊರಹಾಕಲಿ ಎಂದು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಘನಶ್ಯಾಮ್ ತಿವಾರಿ ಗುಡುಗಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇಂತಹ ಸರ್ವಾಧಿಕಾರಿ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಭರತ್‌ಪುರ್ ಜಿಲ್ಲೆಯಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗನೇರ್ ಜಿಲ್ಲೆಯ ಶಾಸಕ ತಿವಾರಿ, ಸರಕಾರದ ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಿದ್ದೇನೆ. ಒಂದು ವೇಳೆ ಪಕ್ಷದ ಹೈಕಮಾಂಡ್‌ಗೆ ತಾಕತ್ತಿದ್ರೆ ಪಕ್ಷದಿಂದ ಹೊರಹಾಕಲಿ ಎಂದು ಅಬ್ಬರಿಸಿದ್ದಾರೆ.
 
ರಾಜ್ಯದ ಅಳ್ವಾರ್, ಅಜ್ಮೇರ್ ಜಿಲ್ಲೆಗಳಲ್ಲಿ ಉಪಲೋಕಸಭಾ ಚುನಾವಣೆ ನಡೆಯುತ್ತಿದ್ದು ಮತ್ತು ಮಂಡಲ್‌ಘರ್‌ನಲ್ಲಿ ವಿಧಾನಸಭೆಗೆ ಇದೇ ತಿಂಗಳು ಉಪಚುನಾವಣೆ ನಡೆಯಲಿದೆ. ಕಳೆದ ನಾಲ್ಕು ವರ್ಷಗಳ ಸಾಧನೆಯನ್ನು ಜನತೆ ಪ್ರಶ್ನಿಸುತ್ತಿದ್ದಾರೆ. ಸಿಎಂ ರಾಜೇ ಕಪ್ಪು ಕಾಯ್ದೆಯನ್ನು ಯಾಕೆ ಜಾರಿಗೆ ತಂದಿದ್ದಾರೆ?ಯುವಕರಿಗೆ ಯಾಕೆ ಉದ್ಯೋಗ ನೀಡಲಿಲ್ಲ. ಮೀಸಲಾತಿಯ ನೆಪದಲ್ಲಿ ಸರಕಾರ ಉದ್ಯೋಗಗಳನ್ನು ಯಾಕೆ ನೆನೆಗುದಿಯಲ್ಲಿಡಲಾಯಿತು? ಎಂದು ಪ್ರಶ್ನಿಸಿದ್ದಾರೆ. 
 
ಜೈಪುರ್‌ನ ಸಂಗಾನೇರ್ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿ ಶಾಸಕರಾಗಿರುವ ತಿವಾರಿ, ಜನತೆಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಪಕ್ಷಕ್ಕೆ ಧಮ್ ಇದ್ರೆ ಪಕ್ಷದಿಂದ ಹೊರಹಾಕಲಿ ಎಂದರು.
 
ವಸುಂಧರಾ ರಾಜೇಯನ್ನು ಸಿಎಂ ಸ್ಥಾನದಿಂದ ಕಿತ್ತುಹಾಕದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ ಎಂದು ಹಿರಿಯ ಬಿಜೆಪಿ ನಾಯಕ ಘನಶ್ಯಾಮ್ ತಿವಾರಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ