ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಕೇಂದ್ರ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಮತ್ತು ಆರೆಸ್ಸೆಸ್ ನಾಯಕ ಗೋವಿಂದಾಚಾರ್ಯ ಈಗಾಗಲೇ ಹೇಳಿದ್ದಾರೆ. ತನಿಖೆಯಲ್ಲಿ ನಿರಪರಾಧಿ ಎಂದು ಸಾಬೀತಾದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಯಾರು ತಡೆಯಲಾಗದು ಎಂದು ಸಲಹೆ ನೀಡಿದ್ದಾರೆ.
ಹಣದುರಪಯೋಗ, ಹವಾಲಾ ಹಗರಣ, ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿಗೆ ನೆರವಾದ ಆರೋಪ ಎದುರಿಸುತ್ತಿರುವ ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ.