ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬಂಧನ?

ಮಂಗಳವಾರ, 2 ಫೆಬ್ರವರಿ 2016 (16:43 IST)
ಕಬಾಲಿ ಚಿತ್ರದ ಶೂಟಿಂಗ್‌ಗಾಗಿ ಮಲೇಷ್ಯಾಗೆ ತೆರಳುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್‌ರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ರಜನಿಕಾಂತ್ ಪಾಸ್‌ಪೋರ್ಟ್ ತರುವುದನ್ನು ಮರೆತಿದ್ದರಿಂದ ಅವರಿಗೆ ಮಲೇಷ್ಯಾಗೆ ಪ್ರಯಾಣಿಸಲು ಅನುಮತಿ ನೀಡಲಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. 
 
ಏತನ್ಮಧ್ಯೆ, ರಜನಿಕಾಂತ್ ಅವರ ಸಹಾಯಕ ಸ್ವಲ್ಪ ಸಮಯದ ನಂತರ ಪಾಸ್‌ಪೋರ್ಟ್ ತೆಗೆದುಕೊಂಡು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪಾಸ್‌ಪೋರ್ಟ್ ಪಡೆದ ರಜನಿ ಮಲೇಷ್ಯಾಕ್ಕೆ ಯಾವುದೇ ಅಡೆತಡೆಯಿಲ್ಲದೇ ಪ್ರಯಾಣಿಸಿದರು ಎಂದು ಮೂಲಗಳು ತಿಳಿಸಿವೆ.
 
ಪಾ ರಂಜಿತ್ ನಿರ್ದೆಶನದ ರಜನಿಕಾಂತ್ ನಟಿಸಿರುವ ಕಬಾಲಿ ಚಿತ್ರದ ಶೂಟಿಂಗ್ ಮಲೇಷ್ಯಾದಲ್ಲಿ ಮುಂದುವರಿದಿದೆ. ಚಿತ್ರದಲ್ಲಿ ರಾಧಿಕಾ ಅಪ್ಟೆ, ಕಿಶೋರ್, ಕಲೈಯರಸನ್, ಧನಸಿಕಾ ಮತ್ತು ದಿನೇಶ್ ರವಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
 
ಕಬಾಲಿ ಚಿತ್ರ ಮೇ ತಿಂಗಳಲ್ಲಿ ತೆರೆಗೆ ಬರುವ ನಿರೀಕ್ಷೆಗಳಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟ ರಜನಿ ಅಭಿನಯದ ಚಿತ್ರ ವೀಕ್ಷಿಸಲು ಕಾತುರರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ