ಮುಖ್ಯಮಂತ್ರಿ ನಬಾಮ್ ಟುಕಿ ವಿರುದ್ಧ 21 ಶಾಸಕರ ಬಂಡಾಯವೆದ್ದ ಸಂದರ್ಭದಲ್ಲಿ ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಖೋವಾ ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ರಾಜ್ಯಪಾಲರ ಶಿಫಾರಸ್ಸಿನಂತೆ ಕೇಂದ್ರ ಸರಕಾರ ರಾಜ್ಯ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಅಡಳಿತ ಹೇರಿತ್ತು. ಇದೀಗ ಸುಪ್ರೀಂಕೋರ್ಟ್ ಆದೇಶ ಬಿಜೆಪಿಗೆ ಮುಖಭಂಗವಾದಂತಾಗಿದೆ.