ಅರುಣಾಚಲ ಮುಖಭಂಗ: ತುರ್ತುಸಭೆ ಕರೆದ ಗೃಹ ಸಚಿವ ರಾಜನಾಥ್ ಸಿಂಗ್

ಬುಧವಾರ, 13 ಜುಲೈ 2016 (20:08 IST)
ಅರುಣಾಚಲ ಪ್ರದೇಶದಲ್ಲಿ ಕೇಂದ್ರ ಸರಕಾರ ಹೇರಿದ್ದ ರಾಷ್ಟ್ರಪತಿ ಅಡಳಿತವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯಸಚಿವ ರಾಜನಾಥ್ ಸಿಂಗ್ ಪಕ್ಷದ ಮುಖಂಡರ ತುರ್ತುಸಭೆಯನ್ನು ಕರೆದಿದ್ದಾರೆ. 
 
ಮುಖ್ಯಮಂತ್ರಿ ನಬಾಮ್ ಟುಕಿ ವಿರುದ್ಧ 21 ಶಾಸಕರ ಬಂಡಾಯವೆದ್ದ ಸಂದರ್ಭದಲ್ಲಿ ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಖೋವಾ ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ರಾಜ್ಯಪಾಲರ ಶಿಫಾರಸ್ಸಿನಂತೆ ಕೇಂದ್ರ ಸರಕಾರ ರಾಜ್ಯ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಅಡಳಿತ ಹೇರಿತ್ತು. ಇದೀಗ ಸುಪ್ರೀಂಕೋರ್ಟ್ ಆದೇಶ ಬಿಜೆಪಿಗೆ ಮುಖಭಂಗವಾದಂತಾಗಿದೆ.
 
ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ, ಅರುಣಾಚಲ ಪ್ರದೇಶದಲ್ಲಿ ಕೇಂದ್ರ ಸರಕಾರ ಹೇರಿದ್ದ ರಾಷ್ಟ್ರಪತಿ ಅಡಳಿತವನ್ನು ವಜಾಗೊಳಿಸಿ ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ತರುವಂತೆ ಆದೇಶ ನೀಡಿತು. 
 
ಉತ್ತರಾಖಂಡ್ ರಾಜ್ಯದಲ್ಲೂ ರಾಷ್ಟ್ರಪತಿ ಅಳ್ವಿಕೆ ಹೇರಿ ಮುಖಭಂಗಕ್ಕೊಳಗಾಗಿದ್ದ ಮೋದಿ ಸರಕಾರ, ಇದೀಗ ಮತ್ತೊಮ್ಮೆ ಮುಖಭಂಗ ಅನುಭವಿಸಿದೆ.
 
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಿ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹಖಾತೆ ಸಚಿವ ರಾಜನಾಥ್ ಸಿಂಗ್ ಪಕ್ಷದ ತುರ್ತುಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ