ಇಂದು ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿ ಸ್ಥಾಪನೆ

Krishnaveni K

ಗುರುವಾರ, 18 ಜನವರಿ 2024 (12:39 IST)
ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಮೂರು ದಿನಗಳ ಮುಂಚಿತವಾಗಿ ಇಂದು ಅಯೋಧ್ಯೆಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.

ನಿನ್ನೆಯೇ ಅಯೋಧ್ಯೆಗೆ ಮೈಸೂರಿನ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾನ ಮೂರ್ತಿಯನ್ನು ಕರೆತರಲಾಗಿದೆ. ಈ ವೇಳೆ ಜನರು ಜೈ ಶ್ರೀರಾಮ ಘೋಷಣೆ ಕೂಗಿ ಸ್ವಾಗತ ಕೋರಿದ್ದಾರೆ.

ಇಂದು ಗರ್ಭಗುಡಿಯಲ್ಲಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಇಂದು ಮಧ‍್ಯಾಹ್ನ 12.20 ರಿಂದ 1.28 ರೊಳಗಿನ ಮುಹೂರ್ತದಲ್ಲಿ  ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.  ಇಂದು ಸಂಕಲ್ಪ ಪೂಜೆಯೊಂದಿಗೆ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಗಳು ಆರಂಭವಾಗಲಿದೆ.

ಜನವರಿ 22 ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಯಜಮಾನನ ಸ್ಥಾನದಲ್ಲಿ ನಿಂತು ಪ್ರಧಾನಿ ಮೋದಿ ನಡೆಸಿಕೊಡಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ