ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ

ಗುರುವಾರ, 9 ಡಿಸೆಂಬರ್ 2021 (06:43 IST)
ಚೆನ್ನೈ : ತಮಿಳುನಾಡಿನಲ್ಲಿ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದು,
ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತಿದೆ. ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಬಳಿಕ ಕಾಮ್ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ದೆಹಲಿ ಕಂಟೋನ್ಮೆಂಟ್ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸದ್ಯ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರವಿದೆ. 
.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ