ತಿಮ್ಮಪ್ಪನ ದರ್ಶನ ಪಡೆದ ಕ್ರಿಕೆಟ್ ದೇವರು

ಗುರುವಾರ, 20 ಜುಲೈ 2017 (17:54 IST)
ತಿರುಮಲ: ಮಾಸ್ಟರ್ ಬ್ಲಾಸ್ಟರ್ ಸಚಿನ ತೆಂಡೂಲ್ಕರ್ ಅವರು ಪತ್ನಿ ಸಮೇತರಾಗಿ ತಿರುಪತಿಗೆ ತೆರಳಿದ್ದು, ತಿಮ್ಮಪ್ಪನ ದರ್ಶನ ಪಡೆದರು. 
 
ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ಬಂದ ಸಚಿನ್ ಹಾಗೂ ಪತ್ನಿ ಅಂಜಲಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿದ ಅವರನ್ನು ಟಿಟಿಡಿ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು.
 
ದರ್ಶನದ ಬಳಿಕ ರಂಗನಾಯಕುಲ ಮಂಟಪದಲ್ಲಿ ಸಚಿನ್ ದಂಪತಿಗಳಿಗೆ ದೇವಸ್ಥಾನದ ಮಂಡಳಿವತಿಯಿಂದ ರೇಷ್ಮೆ ಶಾಲು ಹೊದಿಸಿ, ಸತ್ಕರಿಸಿ ತೀರ್ಥ ಪ್ರಸಾದ ವಿತರಿಸಲಾಯಿತು. ಈ ವೇಳೆ ಸಚಿನ್ ಜೊತೆ ಹೈದರಾಬಾದ್ ಕ್ರಿಕೆಟ್ ಅಸೋಯಿಸೇಶನ್‌ನ ಚಾಮುಂಡೇಶ್ವರಿನಾಥ್ ಮತ್ತಿತರರು ಉಪಸ್ಥಿತರಿದ್ದರು.
 

ವೆಬ್ದುನಿಯಾವನ್ನು ಓದಿ