ದಾದ್ರಿ ಹತ್ಯೆ ಸೇರಿದಂತೆ ಹಲವು ಕೋಮು ಘಟನೆಗಳಲ್ಲಿ ಬಿಜೆಪಿ ನಾಯಕರ ಕೈವಾಡವಿರುವುದು ಸಾಬೀತಾಗಿದೆ. ಬಿಜೆಪಿ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ರಾಜ್ಯದಲ್ಲಿ ಅಸಹಿಷ್ಣುತೆಯ ವಾತಾವರಣ ಸೃಷ್ಟಿಸುತ್ತಿದೆ. ಆದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಕನಸು ನನಸಾಗುವುದಿಲ್ಲ ಎಂದು ಸಮಾಜಿ ವಾದಿ ಪಕ್ಷದ ಮುಖ್ಯಸ್ಥ ನರೇಶ್ ಅಗರ್ವಾಲ್ ತಿರುಗೇಟು ನೀಡಿದ್ದಾರೆ.
ನೋಯಿಡಾದ ಮೊಹಮ್ಮದ್ ಅಖ್ಲಕ್ ಹತ್ಯೆ ಪ್ರಕರಣದಲ್ಲಿ ಮೂವರು ಬಿಜೆಪಿ ನಾಯಕರ ಕೈವಾಡವಿದೆ. ಒಂದು ವೇಳೆ, ಪ್ರಧಾನಿ ನರೇಂದ್ರ ಮೋದಿ ಬಯಸಿದಲ್ಲಿ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಹೇಳಿಕೆ ನೀಡಿದ್ದರು.