ಅಭಿವೃದ್ಧಿಯ ಅಜೆಂಡಾವನ್ನು ಇಟ್ಟುಕೊಂಡು ಭಾರತೀಯ ಜನತಾ ಪಕ್ಷ ರಾಷ್ಟ್ರೀಯ ಚುನಾವಣೆಯನ್ನು ಗೆದ್ದುಕೊಂಡಿತು. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ 'ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ' ಎನ್ನುವ ರಣತಂತ್ರ ಆರಂಭಿಸಿದೆ.
ಕಾಂಗ್ರೆಸ್-ಎನ್ಸಿಪಿ ಮೈತ್ರಿಯ ಸರಕಾರ ಕೇಂದ್ರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಆಪಾದಿಸಿದ ಸಂಸದ ಅನಿಲ್ ಶಿರೋಲೆ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಶಿವಸೇನೆ ಮೈತ್ರಿಕೂಟವನ್ನು ಆಯ್ಕೆ ಮಾಡಿಕೊಂಡರೆ, ನಾವು ಉತ್ತಮ ಸಮನ್ವಯತೆ ಮತ್ತು ಸಹಕಾರವನ್ನು ನಿರೀಕ್ಷಿಸಬಹುದು. ಕೇಂದ್ರದ ನಿರ್ದೇಶನಗಳನ್ನು ಈಗಿರುವ ರಾಜ್ಯ ಸರಕಾರ ಅನುಸರಿಸದ ಕಾರಣಕ್ಕೆ ಪುಣೆಯಲ್ಲಿ ಮೆಟ್ರೋದಂತಹ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷಗಳು ಅಧಿಕಾರದಲ್ಲಿದ್ದರೆ ಇಂತಹ ಸಮಸ್ಯೆಗಳು ಉದ್ಭವವಾಗಲಾರದು ಎಂದರು.