ಗಳಗಳನೆ ಅತ್ತ ಶಶಿಕಲಾ.. ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ

ಮಂಗಳವಾರ, 14 ಫೆಬ್ರವರಿ 2017 (11:12 IST)
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾಗೆ ಸುಪ್ರೀಂಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ ಬೆನ್ನಲ್ಲೇ ಚೆನ್ನೈ ಪೊಲೀಸರು ಶಶಿಕಲಾ ಬಂಧನಕ್ಕೆ ಮುಂದಾಗಿದ್ದಾರೆ.


ಶಶಿಕಲಾ ಶಾಸಕರ ಜೊತೆ ವಾಸ್ತವ್ಯ ಹೂಡಿರುವ ಗೋಲ್ಡನ್ ಬೇ ರೆಸಾರ್ಟ್`ನತ್ತ ಪೊಲೀಸರು ತೆರಳಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧನಕ್ಕೊಳಪಡಿಸುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಕೂಡಲೇ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಕೋರ್ಟ್`ಗೆ ಹಾಜರಾಗಬೇಕೆಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಧನದ ಬಳಿಕ ಜಯಲಲಿತಾರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆತರುವ ಸಾಧ್ಯತೆ ಇದೆ.

ಗಳಗಳನೆ ಅತ್ತ ಶಶಿಕಲಾ: ಇತ್ತ ಸುಪ್ರೀಂ ತೀರ್ಪು ಪ್ರಕಟವಾಗುತ್ತಿದ್ದಂತೆ ರೆಸಾರ್ಟ್`ನಲ್ಲೇ ಸಶಿಕಲಾ ಗಳಗಳನೆ ಅತ್ತಿದ್ದಾರೆಂಬ ಮಾಹಿತಿ ಸಿಕ್ಕಿದೆ.

 

ವೆಬ್ದುನಿಯಾವನ್ನು ಓದಿ