ಭಾರತೀಯ ಮಹಿಳೆಯ ಕೈಯನ್ನು ಸೌದಿಯ ಮಾಲೀಕಳು ಕತ್ತರಿಸಿದ ಆಘಾತಕಾರಿ ಘಟನೆ ಬಗ್ಗೆ ವಿದೇಶಾಂಗ ವ್ಯವಹಾರ ಸಚಿವಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಘಟನೆ ವಿರುದ್ಧ ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಆರೋಪಿ ವಿರುದ್ಧ ಹತ್ಯೆ ಪ್ರಯತ್ನದ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದೆ. ರಿಯಾದ್ನಲ್ಲಿ ಭಾರತೀಯ ರಾಯಭಾರಿ ಕಚೇರಿ ಸಕ್ರಿಯವಾಗಿ ಈ ವಿಷಯ ಕುರಿತು ಸೌದಿ ಅಧಿಕಾರಿಗಳ ಜತೆ ವಿಚಾರವಿನಿಮಯ ನಡೆಸುತ್ತಿದೆ ಎಂದು ಎಂಇಎ ಅಧಿಕೃತ ವಕ್ತಾರ ವಿಕಾಸ್ ಸ್ವರೂಪ್ ಹೇಳಿದರು.