ಅದರಲ್ಲೂ ದೇಶದಲ್ಲಿರುವ ಸೈನಿಕ ಶಾಲೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅತಿ ಹೆಚ್ಚು ಅಪಾಯದ ಭೀತಿ ಇರುವ ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ, ಹೈದ್ರಾಬಾದ್ ಸೇರಿದಂತೆ ಪ್ರಮುಖ ನಗರದಲ್ಲಿರುವ ಸೈನಿಕ ಶಾಲೆಗಳಿಗೆ ,ಸೂಕ್ತ ಭದ್ರತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬರುವ ಶಾಲೆಗಳ ಪ್ರಾಚಾರ್ಯರು, ಮುಖ್ಯಸ್ಥರ ಜತೆ ಸಂಪರ್ಕದಲ್ಲಿದ್ದು, ಭದ್ರತೆ ಕುರಿತಂತೆ ನಿಗಾ ವಹಿಸಬೇಕೆಂದು ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಲಾಗಿದೆ.