ಮಂಗಳಯಾನ ನೌಕೆ ಮಂಗಳನ ಕಕ್ಷೆ ಸೇರುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೆಪ್ಟೆಂಬರ್ 24ರಂದು ನೌಕೆ ಮಂಗಳನ ಕಕ್ಷೆ ಸೇರಲಿದೆ. 300 ದಿನದಿಂದ ನಿಷ್ಕ್ರಿಯವಾಗಿದ್ದ ಇಂಜಿನ್ ಪರೀಕ್ಷಾರ್ಥ ಚಾಲನೆ ಮಾಡಲಾಗಿದ್ದು, ಈ ಪರೀಕ್ಷೆಯಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
ಭಾರತದ ವಿಜ್ಞಾನ ಸಮುದಾಯ ಉಸಿರುಬಿಗಿ ಹಿಡಿದು ಸೆ.24ರಂದು ಮಂಗಳಯಾನ ನೌಕೆ ಕೆಂಪು ಗ್ರಹದ ಕಕ್ಷೆಗೆ ಪ್ರವೇಶ ಪಡೆಯುವುದನ್ನು ವೀಕ್ಷಿಸುವುದಕ್ಕೆ ಕಾಯುತ್ತಿದ್ದಾರೆ. ಗಗನನೌಕೆ ಈ ಗುರಿಯಲ್ಲಿ ಯಶಸ್ವಿಯಾದರೆ ಅಮೆರಿಕ, ರಷ್ಯಾ ಮತ್ತು ಯುರೋಪ್ ನಂತರ ಕೆಂಪು ಗ್ರಹವನ್ನು ತಲುಪಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ.