ತಾಯಿ ಓದುವಂತೆ ಒತ್ತಾಯಿಸುತ್ತಿದ್ದಕ್ಕೆ ಮಗಳು ಏನ್ ಮಾಡುದ್ಲು ನೋಡಿ!?

ಬುಧವಾರ, 27 ಜುಲೈ 2022 (09:53 IST)
ಚೆನ್ನೈ : ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ 3ನೇ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ಇದಾಗಿದೆ.
 
ತಾಯಿ ಓದುವಂತೆ ಗದರಿಸುತ್ತಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಬಾಲಕಿಯ ಡೆತ್ನೋಟ್ ಪತ್ತೆಯಾಗಿದ್ದು, ಆಕೆಯ ಪೋಷಕರು ಐಎಎಸ್ ಪ್ರವೇಶ ಪರೀಕ್ಷೆಯಲ್ಲಿ ಮಗಳು ತೇರ್ಗಡೆಯಾಗಬೇಕು ಎಂದು ಬಯಸಿದ್ದರು. ಇದರಿಂದ ಆಕೆಗೆ ಅಪಾರ ಒತ್ತಡವಾಗಿತ್ತು.

ತಾಯಿ ಓದುವಂತೆ ಗದರಿಸುತ್ತಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ