ಬಿಹಾರ್ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಭಾರಿ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿವೆ. ಇದೀಗ ಆರ್ಜೆಡಿ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರಘುನಾಥ್ ಝಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮುಲಾಯಂ ಪಕ್ಷದ ಕೈ ಹಿಡಿದಿದ್ದಾರೆ.
ಆರ್ಜೆಡಿ ಪಕ್ಷದ ಬ್ರಾಹ್ಮಣ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದ ಝಾ, ಆರೋಗ್ಯ ಸಚಿವರಾಗಿ , ಕೈಗಾರಿಕೆ ಸಚಿವರಾಗಿ ಮತ್ತು ಅಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸಂಪುಟದಲ್ಲಿ ಸಾರ್ವಜನಿಕ ಉದ್ಯಮ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.