ಪೊಲೀಸ್ ಮೂಲಗಳ ಪ್ರಕಾರ, ನಿನ್ನೆ ತನ್ನನ್ನು ಮದುವೆಯಾಗುವಂತೆ ಜಯದೀಪ್ ಸೆಟ್ಟಾ ಮಹಿಳೆ ಖಾತುಂಗೆ ಪ್ರಸ್ತಾವನೆ ಸಲ್ಲಿಸಿದ್ದ. ಆದರೆ, ಆಕೆ ತಿರಸ್ಕರಿಸಿದ್ದರಿಂದ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಲು ಪ್ರಯತ್ನಿಸಿದ. ಮನೆಯ ಮಾಲೀಕ ಗೋಸ್ವಾಮಿ ಆರೋಪಿ ಸೆಟ್ಟಾನನ್ನು ಹಿಡಿಯಲು ಯತ್ನಿಸಿದರೂ ಪ್ರಯೋಜನವಾಗಲ್ಲಿಲ್ಲ. ಆರೋಪಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ನಂತರ ಸರಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಜಯದೀಪ್ ಸುಮಾರು ಒಂದುವರೆ ವರ್ಷಗಳ ಕಾಲ ಆಕೆಯ ಪ್ರೀತಿಯ ಬಲೆಗೆ ಬಿದ್ದಿದ್ದ. ಆದರೆ, ಆಕೆ, ಅತನ ಪ್ರಸ್ತಾವನೆ ತಿರಸ್ಕರಿಸಿದ್ದರಿಂದ ಹತ್ಯೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಸ್.ಎನ್.ನಾಯ್ಡು ಮಾಹಿತಿ ನೀಡಿದ್ದಾರೆ.