ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರನ್ನು ಬದಲಿಸಿ ಅವರ ಸ್ಥಾನಕ್ಕೆ ತಾವು ಮರಳಬಹುದು ಎನ್ನುವ ವರದಿಗಳನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಳ್ಳಿಹಾಕಿದ್ದು, 2019 ರವರೆಗೆ ತಮ್ಮ ಆಕಾಂಕ್ಷೆಗಳಿಗೆ ವಿರಾಮ ನೀಡುತ್ತಿರುವುದಾಗಿ ಹೇಳಿದ್ದಾರೆ.
ಅಮಿತ್ ಶಾ ಅವರಿಗೆ ಆಪ್ತವಾಗಿರುವ ಮೂಲಗಳ ಪ್ರಕಾರ, ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಗೆಲುವು ಮತ್ತು 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮಹತ್ತರ ಪಾತ್ರವಹಿಸುವುದು. ಅಲ್ಲಿಯವರೆಗೆ ರಾಷ್ಟ್ರಾಧ್ಯಕ್ಷ ಅವಧಿ ಕೂಡಾ ಮುಕ್ತಾಯಗೊಳ್ಳಲಿರುವುದರಿಂದ, ತದ ನಂತರ ಗುಜರಾತ್ಗೆ ಮರಳಲು ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.