ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್: ಶರದ್ ಪವಾರ್ ನಿಲುವಿಗೆ ಕಾಂಗ್ರೆಸ್ ನಿರ್ಲಕ್ಷ

ಶನಿವಾರ, 30 ಏಪ್ರಿಲ್ 2016 (16:05 IST)
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಂಯುಕ್ತ ಒಕ್ಕೂಟವನ್ನು ಮುನ್ನಡೆಸಲು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೂಕ್ತ ವ್ಯಕ್ತಿ ಎಂಬ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆಯನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. 
 
ಪವಾರ್ ಹೇಳಿಕೆಗೆ ಪ್ರತಿಕ್ರಿಯೆ ಕೇಳಲಾಗಿ ಈ ಕುರಿತು ಮಾತನಾಡಲು ನಿರಾಕರಿಸಿದ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್  ನಾನು ಅಗಸ್ಟಾ ವೆಸ್ಟಲ್ಯಾಂಡ್ ಕುರಿತು ಮಾತ್ರ ಮಾತನಾಡುತ್ತೇನೆ ಎಂದು ಹೇಳಿದರು. 
 
ಬಿಜೆಪಿ ವಿರೋಧಿ ಮೈತ್ರಿಕೂಟಕ್ಕೆ ನಿತೀಶ್ ಕುಮಾರ್ ಸೂಕ್ತ, ಸಮರ್ಥ ವ್ಯಕ್ತಿ ಎಂದು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಸಂದರ್ಶನವೊಂದರಲ್ಲಿ ಹೇಳಿದ್ದರು. 
 
ತಮ್ಮ ಪಕ್ಷದ ಉಪಾಧ್ಯಕ್ಷ  ರಾಹುಲ್ ಗಾಂಧಿ ಭವಿಷ್ಯದ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಪರಿಗಣಿಸುತ್ತದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   
 

ವೆಬ್ದುನಿಯಾವನ್ನು ಓದಿ