ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ: ಶರದ್ ಪವಾರ್ ಹೇಳಿದ್ದೇನು?
ಇತ್ತೀಚೆಗೆ ನಡೆದಿದ್ದ ವಿಪಕ್ಷಗಳ ಮೈತ್ರಿ ಕೂಟ ಇಂಡಿಯಾ ಸಭೆಯಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿಗೆ ಮಲ್ಲಿಕಾರ್ಜುನ ಖರ್ಗೆ ಹೆಸರು ಸೂಚಿಸಿದ್ದರು. ಇದಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು.
ಇದೀಗ ಎನ್ ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅಪಸ್ವರವೆತ್ತಿದ್ದಾರೆ. ಪ್ರಧಾನಿ ಅಭ್ಯರ್ಥಿಗೆ ಖರ್ಗೆ ಹೆಸರು ಸೂಚಿಸುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಮೂಲಕ ಮೈತ್ರಿ ಕೂಟದಲ್ಲಿ ಮತ್ತೊಮ್ಮೆ ಭಿನ್ನಮತ ಸ್ಪೋಟಗೊಂಡಿದೆ.
ತುರ್ತು ಪರಿಸ್ಥಿತಿ ನಂತರ ನಡೆದಿದ್ದ 1977 ರ ಚುನಾವಣೆಯಲ್ಲೂ ಪ್ರಧಾನಿ ಅಭ್ಯರ್ಥಿ ಇಲ್ಲದೇ ಚುನಾವಣೆ ಎದುರಿಸಿ ಗೆದ್ದಿದ್ದೆವು. ಚುನಾವಣೆ ನಂತರ ಮೊರಾರ್ಜಿ ದೇಸಾಯಿಯವರನ್ನು ಪ್ರಧಾನಿಯಾಗಿ ಮಾಡಿದ್ದೆವು. ಈಗಲೂ ಪ್ರಧಾನಿ ಅಭ್ಯರ್ಥಿ ಯಾರೆಂದು ಮೊದಲೇ ಹೇಳದೇ ಇದ್ದರೆ ನಷ್ಟವೇನೂ ಆಗದು ಎಂದು ಶರದ್ ಪವಾರ್ ಹೇಳಿದ್ದಾರೆ.