ಎನ್ ಸಿಪಿ ನಾಯಕ ಶರದ್ ಪವಾರ್ ಗೆ ಅನಾರೋಗ್ಯ

ಮಂಗಳವಾರ, 30 ಮಾರ್ಚ್ 2021 (08:58 IST)
ಮುಂಬೈ: ಎನ್ ಸಿಪಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅನಾರೋಗ್ಯಕ್ಕೀಡಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.


ಪಿತ್ತಕೋಶಕ್ಕೆ ಸಂಬಂಧಿಸಿದ ಅನಾರೋಗ್ಯಕ್ಕೀಡಾಗಿರುವ ಶರದ್ ಪವಾರ್ ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅದರಂತೆ ಇಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.

ಕೆಳ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪವಾರ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರ ಪಿತ್ತಕೋಶದಲ್ಲಿ ಸಮಸ್ಯೆಯಿರುವುದು ತಿಳಿದುಬಂದಿದೆ. ಎಂಡೋಸ್ಕೋಪಿ ಬಳಿಕ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಕೆಲವು ದಿನಗಳ ಮಟ್ಟಿಗೆ ಅವರಿಗೆ ವಿಶ್ರಾಂತಿ ಅನಿವಾರ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ