ಅನಾಮಿಕ ವ್ಯಕ್ತಿಯೊಬ್ಬರು ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರಿಗೆ ದೂರವಾಣಿ ಕರೆ ಮಾಡಿ ಶೀನಾ ಕೊಲೆಯಾಗಿರುವುದ ಬಗ್ಗೆ ಸುಳಿವು ನೀಡಿದ್ದರು. ಆ ಕರೆ ಉತ್ತರಪ್ರದೇಶದಿಂದ ಬಂದಿದೆಂಬುದನ್ನಷ್ಟೇ ಪೊಲೀಸರು ಕಂಡುಕೊಂಡಿದ್ದು ಕರೆ ಮಾಡಿದ್ದು ಯಾರು ಎಂಬುದು ಇನ್ನುವರೆಗೂ ಪತ್ತೆಯಾಗಿಲ್ಲ. ಆ ವ್ಯಕ್ತಿಯಿಂದ ಮಹತ್ವದ ಸುಳಿವು ಸಿಗಬಹುದೆಂಬ ಕಾರಣಕ್ಕೆ ಪೊಲೀಸರು ಹುಡುಕಾಟ ಕೈಗೊಂಡಿದ್ದು, ಆ ವ್ಯಕ್ತಿ ಪ್ರಕರಣದ ಪ್ರತ್ಯಕ್ಷದರ್ಶಿಯಾಗಿರಬೇಕೆಂದು ಪೊಲೀಸರು ಊಹಿಸಿದ್ದಾರೆ.