ಕನ್ನಡಿಗರ ಮೇಲೆ ಶಿಂಧೆ ಸರ್ಕಾರದ ದ್ವೇಷ : ಅಮಿತ್ ಶಾ

ಶನಿವಾರ, 10 ಡಿಸೆಂಬರ್ 2022 (07:07 IST)
ಮುಂಬೈ : ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಕೇಂದ್ರದ ಅಂಗಳ ತಲುಪಿದೆ. ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ.

ಕರ್ನಾಟಕದಲ್ಲಿ ಮಹಾರಾಷ್ಟ್ರಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಸೂಚಿಸಬೇಕು. ಕರ್ನಾಟಕ ಸಿಎಂ ಪ್ರಚೋದನಾಕಾರಿ ಹೇಳಿಕೆ ನೀಡ್ತಿದ್ದಾರೆ ಎಂದು ಆರೋಪಿಸಿದೆ.

ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿದ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ