ಶಿವಸೇನಾ ಮುಖಂಡನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಶೂಟೌಟ್

ಗುರುವಾರ, 4 ಫೆಬ್ರವರಿ 2016 (21:07 IST)
ಆಘಾತಕಾರಿ ಘಟನೆಯೊಂದರಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಶಿವಸೇನೆ ಅಧ್ಯಕ್ಷ ಅಮಿತ್ ಅರೋರಾ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
 
ನಗರದ ಬಸ್ತಿ ಜೋಡೆವಾಲ್ ಚೌಕ್‌ನಲ್ಲಿ ಅರೋರಾ ತಮ್ಮ ಗನ್‌ಮ್ಯಾನ್‌ನೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಮಿತ್ ಅರೋರಾರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ನೀಡಲಾಗಿದೆ. ಇದೀಗ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
ಜಾಲಂಧರ್ ಬೈಪಾಸ್ ರಸ್ತೆಯಿಂದ  ಬಸ್ತಿ ಜೋಡೆವಾಲ್ ಚೌಕ್‌‌ನತ್ತ ಕಾರಿನಲ್ಲಿ ಬಂದ ಅರೋರಾ ತಮ್ಮ ಗೆಳೆಯರಿಗಾಗಿ ನಿರೀಕ್ಷಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಕಾರಿನ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾದರು.
 
ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ