ಪಿಎಫ್‍ಐ, ಎಸ್‍ಡಿಪಿಐ ನಿಷೇಧಿಸಲು ಶೋಭಾ ಕರಂದ್ಲಾಜೆ ಒತ್ತಾಯ

ಗುರುವಾರ, 4 ಜನವರಿ 2018 (14:54 IST)
ಕರಾವಳಿಯಲ್ಲಿ ಹಿಂದೂಗಳ ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ಇದರ ಹಿಂದೆ ಪಿಎಫ್‍ಐ, ಎಸ್‍ಡಿಪಿಐ ಹೆಸರುಗಳು ಕೇಳಿಬರುತ್ತಿವೆ. ಆದ್ದರಿಂದ ಈ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ದೀಪಕ್‍ರಾವ್ ಕೊಲೆ ಪ್ರಕರಣ ಖಂಡನೀಯವಾಗಿದೆ. ಹಿಂದೂಗಳ ರಕ್ಷಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಜವಾಬ್ದಾರಿ ಇಲ್ಲ. ಮುಸ್ಲಿಮರ ಕೊಲೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಳಜಿ ವಹಿಸುತ್ತಾರೆ ಎಂದು ಟೀಕೆ ಮಾಡಿದರು.
 
ಶಾಂತಿಯುತವಾಗಿ ಶವದ ಮೆರವಣಿಗೆ ನಡೆಸಲು ಅವಕಾಶ ಕೂಡ ನೀಡಲಿಲ್ಲ ಎಂದ ಅವರು ಸರ್ಕಾರದ ನಿರ್ಲಕ್ಷ್ಯದಿಂದಲೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಆದ್ದರಿಂದ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳನ್ನು ರಾಜ್ಯ ಸರ್ಕಾರ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ