ಬೆಳ್ಳಂಬೆಳಗ್ಗೆ ಪಿ.ಚಿದಂಬರಂಗೆ ಶಾಕ್ ಕೊಟ್ಟ ಸಿಬಿಐ!

ಮಂಗಳವಾರ, 17 ಮೇ 2022 (10:58 IST)
ಚೆನ್ನೈ : ಕಾಂಗ್ರೆಸ್ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.

ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮುಂಬೈ, ತಮಿಳುನಾಡಿನ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲಿಸಿದೆ. 

ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಸಿಬಿಐ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ